25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಹೇಮಾವತಿ ವಿ‌ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ “ವಾತ್ಸಲ್ಯ” ಯೋಜನೆಯಡಿ ಬೆಳ್ತಂಗಡಿ ಜೈನ್‌ಪೇಟೆಯ ಪ್ರೇಮಾ ಅವರಿಗೆ ಕಟ್ಟಿಸಿದ ವಾತ್ಸಲ್ಯ ಮನೆಯ ಹಸ್ತಾಂತರ ಕಾರ್ಯಕ್ರಮ ಫೆ.19 ರಂದು ಜರುಗಿತು.

ಈಗಾಗಲೇ ಪ್ರತಿ ತಿಂಗಳು ಮಾಶಾಸನವನ್ನು ಪಡೆಯುತ್ತಿರುವ ಸದಸ್ಯೆ ಪ್ರೇಮಾ ರವರ ವಾಸ್ತವ್ಯದ ಮನೆ ತೀರಾ ದುರಸ್ಥಿಯಲ್ಲಿದ್ದುದನ್ನು ಮನಗಂಡು ಕ್ಷೇತ್ರದ ಕಾರ್ಯಕರ್ತರ ಮೂಲಕ ಆಯ್ಕೆಗೊಳಿಸಿ ಯೋಜನೆ ಅನುಷ್ಠಾನಿಸಲಾಯಿತು.
ಕ್ಷೇತ್ರದ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ರವರು ನೂತನ ಮನೆ ಹಸ್ತಾಂತರಿಸಿ, ಕ್ಷೇತ್ರದಿಂದ ಮಾಶಾಸನ ನೀಡುತ್ತಿರುವ ಸದಸ್ಯರಿಗೆ ಕರೋನ ಸಂದರ್ಭದಲ್ಲಿ ಮಾಶಾಸನ ಮನೆಗೆ ತಲುಪಿಸಿದ ಕಾರ್ಯಕರ್ತರು ಪೋಟೋ ತೆಗೆದು ಹಾಕಿದಾಗ ಪೋಟೋದಲ್ಲಿರುವ ಮನೆಯ ಪರಿಸ್ಥಿತಿಯನ್ನು ಗಮನಿಸಿದ ಹೇಮಾವತಿ ಹೆಗ್ಗಡೆಯವರು ಈ ವಾತ್ಸಲ್ಯ ಯೋಜನೆ ಆರಂಭಿಸಿದ್ದು, ಈಗಾಗಲೇ ರಾಜ್ಯದಲ್ಲಿ ಸುಮಾರು 800 ಮನೆಗಳ ಹಸ್ತಾಂತರವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲೂ 20 ರಷ್ಟು ಮನೆಗಳು ನಿರ್ಮಾಣವಾಗಿದೆ ಎಂದರು.

ನೂತನ ಗೃಹವನ್ನು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಉದ್ಘಾಟಿಸಿದರೆ, ಗ್ರಾ.ಯೋ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಫಲಕ ಅನಾವರಣಗೊಳಿಸಿದರು. ಮನೆಯೊಡತಿ ಪ್ರೇಮಾ ಶ್ರೀ ದೇವರಿಗೆ ದೀಪ ಪ್ರಜ್ವಲಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಕುರ್ಚಿಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಕ್ಷೇತ್ರದ ವತಿಯಿಂದ ಪ್ರೇಮಾ ಅವರಿಗೆ ವಸ್ತ್ರಗಳು, ಚಾಪೆ ಹಾಗೂ ‘ವಾತ್ಸಲ್ಯ’ ಆಹಾರದ ಕಿಟ್ ನೀಡಲಾಯಿತು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಜಯಾನಂದ ಗೌಡ ಶುಭಕೋರಿದರು.
ಮುಖ್ಯ ಅತಿಥಿಗಳಾಗಿ ಪ್ರಗತಿ ಬಂಧು ಕೇಂದ್ರ ಸಮಿತಿ ಅಧ್ಯಕ್ಷ ಸೀತಾರಾಮ್ ಆರ್, ಜಿಲ್ಲಾ ನಿರ್ದೇಶಕ ದಿನೇಶ್ ಡಿ ,ಜನಜಾಗೃತಿ ವೇದಿಕೆ ತಾಲೂಕು ಸಮಿತಿ ಸದಸ್ಯ, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ, ಮೇಲಂತಬೆಟ್ಟು ಗ್ರಾ.ಪಂ ನಿಕಟಪೂರ್ವಾಧ್ಯಕ್ಷೆ ಸವಿತಾ,ಸದಸ್ಯರಾದ ಚಂದ್ರಶೇಖರ, ಭಗವತಿ ದೇವಸ್ಥಾನದ ಮುಖ್ಯಸ್ಥ ಯೋಗೀಶ್, ಒಕ್ಕೂಟದ ಅಧ್ಯಕ್ಷ ಯಶವಂತ, ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರರಾಜ ಎಂ., ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಗೀತಾ ಸುರೇಶ್ ಶೆಟ್ಟಿ, ಜನಜಾಗೃತಿ ಗ್ರಾಮ ಸಮಿತಿಯ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಯಶೋಧರ ಉಪಸ್ಥಿತರಿದ್ದರು.

ಈ ವೇಳೆ ಮನೆ ನಿರ್ಮಿಸಿದ ಮೇಸ್ತ್ರಿ ಶ್ರೀಧರ್, ಸೇವಾಪ್ರತಿನಿಧಿ ಲೀಲಾ ಮತ್ತು ಜ್ಯೋತಿ, ಶ್ರಮಾದಾನ ಸೇವೆ ನೀಡಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಹಾಗೂ ಸ್ಥಳೀಯರು ಹಾಜರಿದ್ದರು.

ಮೇಲಂತಬೆಟ್ಟು ವಲಯ ಮೇಲ್ವಿಚಾರಕ ಹಾಗೂ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಸ್ವಾಗತಿಸಿ, ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಮಧುರಾ ವಸಂತ್ ಧನ್ಯವಾದ ನೀಡಿದರು.


Related posts

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
error: Content is protected !!