22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

ಬೆಳ್ತಂಗಡಿ :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ ವ್ಯಾಪಿಸುತ್ತಿದೆ.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದ ಗುಡ್ಡ ಪ್ರದೇಶದಲ್ಲಿ ಮಲಯಮಾರುತ ಪರಿಸರದಲ್ಲಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಗುಡ್ಡ ಪ್ರದೇಶವಾಗಿರುವುದರಿಂದ ವಾಹನ ಸಂಚಾರ ಹಾಗೂ ಅಗತ್ಯ ಸಲಕರಣೆಗಳ ಬಳಕೆ ಕಷ್ಟಕರವಾಗಿದ್ದು, ಕಾರ್ಯಾಚರಣೆಗೆ ಸವಾಲು ಎದುರಾಗಿದೆ. ಪಶ್ಚಿಮ ಘಟ್ಟಗಳ ಜೀವವೈವಿಧ್ಯ ಕ್ಕೆ ಪ್ರಸಿದ್ಧ ಈ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಬೆಂಕಿ ನಿಯಂತ್ರಣಕ್ಕೆ ಇಲಾಖೆ ತೀವ್ರ ಪ್ರಯತ್ನ ಮುಂದುವರಿಸಿದೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!