25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ ರಿ ಬಳಂಜ ಇದರ ನೇತೃತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಂಗಣ ಅಬಿವ್ರುದ್ದಿ ಕಾಮಗಾರಿ ನಡೆಯುತ್ತಿದ್ದು ಇದಕ್ಕೆ ಟ್ರಸ್ಟ್ ವತಿಯಿಂದ ಶ್ರಿಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ ಸಲ್ಲಿಸಲಾಗಿತ್ತು.

ಮನವಿಗೆ ಸ್ಪಂದಿಸಿದ ಡಾ| ಹೆಗ್ಗಡೆಯವರು ಶ್ರಿಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪರಿಶೀಲಿಸುವಂತೆ ಸೂಚಿಸಿದ್ದು ಇವರ ಸೂಚನೆಯಂತೆ ಯೋಜನೆಯ ಅಧಿಕಾರಿಗಳು ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ್ದರು. ಇದರಂತೆ ಫೆ.20 ರಂದು ಮೂರು ಲಕ್ಷ ರೂ ಅನುದಾನದ ಮಂಜೂರಾತಿ ಪತ್ರವನ್ನು ಬಳಂಜ ಶಿಕ್ಷಣ ಟ್ರಸ್ಟ್ ರಿ ಬಳಂಜ ಇದರ ಅಧ್ಯಕ್ಷ ಮನೋಹರ್ ಬಳಂಜರಿಗೆ ಯೋಜನೆಯ ನಿರ್ದೇಶಕ ದಿನೇಶ್ ಪೂಜಾರಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ನ ಟ್ರಷ್ಟಿಗಳು ಪ್ರಮೋದ್ ಜೈನ್, ಯೋಜನಾಧಿಕಾರಿ ಅಶೋಕ್ ಬಿ, ಮೇಲ್ವಿಚಾರಕಿ ಪದ್ಮಾವತಿ, ಕಾರ್ಯನಿರತರಾದ ಉಮಾ, ಪೂರ್ಣಿಮ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ , ಶಿಕ್ಷಕಿ ಶೈನಿ ರೀಮಾ ಕ್ರಾಸ್ತಾ ಉಪಸ್ಥಿತರಿದ್ದರು. ಟ್ರಸ್ಟ್ ನೇತ್ರತ್ವದಲ್ಲಿ ಚಿಣ್ಣರ ಅಂಗಣ , ರಂಗಮಂದಿರ ನಿರ್ಮಾಣ, ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ ಯೋಜನೆ ರೂಪಿಸಿ ಶಿಲಾನ್ಯಾಸ ನೆರವೇರಿಸಲಾಗಿದೆ. ಟ್ರಸ್ಟ್ ವತಿಯಿಂದ ಈಗಾಗಲೆ ನಾಲ್ಕು ಗೌರವ‌ ಶಿಕ್ಷಕಿಯರಿಗೆ ಗೌರವಧನ, ಒರ್ವ ಸಹಾಯಕಿಗೆ ಗೌರವಧನ ನೀಡಲಾಗುತ್ತಿದೆ. ಉಚಿತ ಎಲ್ ಕೆ ಜಿ ,ಯು ಕೆ ಜಿ ಶಿಕ್ಷಣ ನೀಡಲಾಗುತ್ತಿದೆ.

Related posts

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya
error: Content is protected !!