22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ಸ್ಫೋಟಕ ವಸ್ತುವನ್ನು ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಮನೆಗೆ ಫೆ.19 ರಂದು ಸಂಜೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಪರಿಶೀಲಿಸಿ ಮಹಜರು ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತ ಮನೆಯಂಗಳದಲ್ಲಿ ಫೆ.18ರಂದು ಸಂಜೆ ಸಂಭವಿಸಿದ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶವಾಗಿ ಪಾರಾಗಿದ್ದರು. ಚೆಂಡಿನಂಥ ವಸ್ತುವೊಂದನ್ನು ಮನೆಯ ನಾಯಿ ಎಲ್ಲಿಂದಲೋ ಕಚ್ಚಿಕೊಂಡು ಬಂದು ಅಂಗಳದ ಬದಿಯಲ್ಲಿ ಹಾಕಿದ್ದು ಇದು ಏನೆಂದು ತಿಳಿಯದ ಮುಗ್ಧ ಮಕ್ಕಳು ಬಾಲ್ ಎಂದು ಕ್ರಿಕೆಟ್ ಆಡುತ್ತಿದ್ದಾಗ ಆ ವಸ್ತು ಸ್ಫೋಟಗೊಂಡಿದ್ದು ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದ. ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಫೋಟಗೊಂಡ ಮನೆಗೆ ಧರ್ಮಸ್ಥಳ ಎಸ್ ಐ ಸಮರ್ಥ್ ಗಾಣಿಗೇರ್, ಸೋಕೋ ವಿಭಾಗದ ಸುಮಂತ್, ಆಶಿಫ್ ಅವರುಗಳನ್ನೊಳಗೊಂಡ ಪೊಲೀಸರ ತಂಡ ಗುರುವಾರ ಸಂಜೆ ಭೇಟಿ ನೀಡಿ ಮನೆಯವರಿಂದ ಘಟನೆಯ ಮಾಹಿತಿ ಪಡೆದಿದ್ದಾರೆ.


ಈ ಸಂದರ್ಭ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸ್ಫೋಟಕದ ಅವಶೇಷ ಮಾದರಿಗಳನ್ನು ಸಂಗ್ರಹಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಖಂಡಿಗ, ಸ್ಥಳೀಯರಾದ ಸಂತೋಷ್ ಬಲಿಪೆ ಇದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!