July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

ಅಳದಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಳದಂಗಡಿ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿಗೆ ಆರ್ಥಿಕ ಸಹಕಾರ ನೀಡಲಾಯಿತು.

ಸಂಘಟನೆಯ ಸಲಹೆಗಾರರು,ಕಾರ್ಮಿಕ ಭವಿಷ್ಯನಿಧಿ ಸಲಹೆಗಾರರಾದ ಸುಬ್ರಹ್ಮಣ್ಯ ಆಚಾರ್ಯ ಪಾಲಬೆರವರು ಕ್ಷೇತ್ರದ ಜಾತ್ರೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷರಾದ ಸುರೇಶ್ ರವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎ,ಕೋಶಾಧಿಕಾರಿ ಪ್ರಶಾಂತ್,ಅಭಯಹಸ್ತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ ರವರು ಉಪಸ್ಥಿತರಿದ್ದರು.

Related posts

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
error: Content is protected !!