23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya
error: Content is protected !!