22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!