September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೊರಸಂಪನ್ಮೂಲ ನೌಕರರಿಂದ ರಕ್ಷಿತ್ ಶಿವರಾಂ ರವರಿಗೆ ಮನವಿ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya
error: Content is protected !!