25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

ಬೆಳ್ತಂಗಡಿ:ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರಗಿದ 16ನೆ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಹೊಸ ಇತಿಹಾಸ ಸೃಷ್ಟಿಸಿ ದಾಖಲೆ ಬರೆದಿದೆ. ಕಳೆದ 15 ವರ್ಷಗಳಲ್ಲಿ ಸುವರ್ಣ ಆರ್ಕೇಡ್ ಆವರಣದಲ್ಲಿ ಜರಗುತ್ತಿದ್ದ ಕಾರ್ಯಕ್ರಮ ಅಪಾರ ಜನಪ್ರಿಯತೆ ಪಡೆಯುತ್ತ ಜನಸಂದಣಿ ಹೆಚ್ಚಳವಾಗಿ ಕಲಾಭಿಮಾನಿಗಳ ವ್ಯವಸ್ಥಿತ ವೀಕ್ಷಣೆಗೋಸ್ಕಾರ ಮಾರಿಗುಡಿ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿತ್ತು .

ಕುತ್ಯಾರು ಶ್ರೀ ಸೋಮನಾಥಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ಜರಗಬೇಕಿದ್ದ ನಾಟಕ ತಾಂತ್ರಿಕ ಅಡಚಣೆ ಉಂಟಾಗಿ ಮರುದಿನಕ್ಕೆ ಮುಂದೂಡಲಾಗಿತ್ತು, ನಿಗದಿತ ಸಮಯಕ್ಕೆ ಸರಿಯಾಗಿ ನಾಟಕ ಪ್ರಾರಂಭಗೊಂಡು ಅಚ್ಚುಕಟ್ಟಾದ ವ್ಯವಸ್ಥೆ ಮೂಲಕ ಸಹಸ್ರಾರು ಸಂಖ್ಯೆಯ ಕಲಾಭಿಮಾನಿಗಳ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಟಕ ವೀಕ್ಷಿಸಲು ಬಂದ ಜನರಿಂದಾಗಿ ಮಾರಿಗುಡಿ ಮೈದಾನ ಹೌಸ್ ಫುಲ್ ಎನಿಸಿತು. ಸಂಪತ್ ಸುವರ್ಣರವರ ಕಲ್ಪನೆಯ ಸುವರ್ಣ ರಂಗ ಸಮ್ಮಾನ 2026, ಭಾಷಣಗಳಿರದ ಸಭಾ ಕಾರ್ಯಕ್ರಮ ರಹಿತ ನಿರ್ವಹಣೆ, ತುಳುನಾಡ ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ, ಶಿಸ್ತು ಬದ್ಧ ವ್ಯವಸ್ಥಿತ ದಕ್ಷ ಸಂಘಟನೆ ಕುರಿತು ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya
error: Content is protected !!