September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ


ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಸ್ಥಾಪಕರಾದ ಲಾರ್ಡ್ ಬ್ಯಾಡನ್ ಪಾವೆಲ್ ಹಾಗೂ ಲೇಡಿ ಓಲಾನಾ ಬ್ಯಾಡನ್ ಪಾವೆಲ್ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯಲ್ಲಿ ಕಬ್ಸ್, ಬುಲ್ ಬುಲ್ ವಿದ್ಯಾರ್ಥಿಗಳಿಂದ ಸುಶಾವ್ಯ ಗೀತೆಗಳು ಹಾಗೂ ನೃತ್ಯವನ್ನು ಪ್ರದರ್ಶನ ಮಾಡಿದರು. ಬುಲ್ ಬುಲ್ ವಿದ್ಯಾರ್ಥಿನಿಯಾದ ಕುಮಾರಿ ಚರಿಷ್ಮ ದಿನದ ಮಹತ್ವವನ್ನು ತಿಳಿಸಿದರು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಗೂ ದೇಶಭಕ್ತಿ ಗೀತೆಯನ್ನು ಹಾಡಿದರು. ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ ಶುಭಹಾರೈಸಿದರು. ಸ್ಕೌಟ್ ವಿದ್ಯಾರ್ಥಿನಿಯಾದ ಕ್ಲೆರಿಷಾ ರೊಡ್ರಿಗಸ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ಪರ್ಶಾ ಸ್ವಾಗತಿಸಿ, ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸ್ಕೌಟ್ ಗೈಡ್ಸ್ ಶಿಕ್ಷಕ ಶಿಕ್ಷಕಿಯರು ಸಹಕರಿಸಿದರು.

Related posts

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya
error: Content is protected !!