ಅಳದಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಳದಂಗಡಿ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿಗೆ ಆರ್ಥಿಕ ಸಹಕಾರ ನೀಡಲಾಯಿತು.
ಸಂಘಟನೆಯ ಸಲಹೆಗಾರರು,ಕಾರ್ಮಿಕ ಭವಿಷ್ಯನಿಧಿ ಸಲಹೆಗಾರರಾದ ಸುಬ್ರಹ್ಮಣ್ಯ ಆಚಾರ್ಯ ಪಾಲಬೆರವರು ಕ್ಷೇತ್ರದ ಜಾತ್ರೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷರಾದ ಸುರೇಶ್ ರವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎ,ಕೋಶಾಧಿಕಾರಿ ಪ್ರಶಾಂತ್,ಅಭಯಹಸ್ತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ ರವರು ಉಪಸ್ಥಿತರಿದ್ದರು.











