September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!