25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!