25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರದ ಮುಖಾಂತರ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಯಕ್ಷಗಾನ ಹಾಗೂ ಸೆಮಿ ಕ್ಲಾಸಿಕಲ್ ತರಗತಿಗಳು, ಹಾಗೂ ಪಾಶ್ಚಿಮಾತ್ಯ ಶೈಲಿಯ ನೃತ್ಯ ತರಗತಿಗಳು ನಡೆಯುತ್ತಿದ್ದು ಆ ತರಗತಿಯಲ್ಲಿ ವಿದ್ಯಾರ್ಥಿಗಳು ಕಲಿತಂತಹ ಕಲೆಗಳನ್ನು ಅನಾವರಣಗೊಳಿಸುವ ಸಲುವಾಗಿ ಕಲಾಬ್ಧಿ ಎನ್ನುವ ಸಾಂಸ್ಕೃತಿಕ ಸ ಹಬ್ಬವನ್ನು ಆಯೋಜಿಸಲಾಗಿತ್ತು.

ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕ ಗೋವಿಂದ ಭಟ್ ನಿಡ್ಲೆ ರವರು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಧ್ಯಾರ್ಥಿಗಳಿಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು, ವಿದ್ಯೆಯ ಮಹತ್ವ, ಸಂಸ್ಕೃತಿ ಸಂಸ್ಕಾರಗಳ ಅಗತ್ಯ ಎಂಬಿತ್ಯಾದಿ 10 ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಶ್ಚಿಮಾತ್ಯ ಶೈಲಿಯ ನೃತ್ಯ ಪ್ರದರ್ಶನ, ಯಕ್ಷಗಾನ ‘ಸುದರ್ಶನ ವಿಜಯ ‘ ಸೆಮಿ ಕ್ಲಾಸಿಕಲ್ ನೃತ್ಯ ‘ಶ್ರೀ ಕೃಷ್ಣ ಲೀಲಾ ವೈಭವ’ ಅತ್ಯಂತ ಸಂಭ್ರಮದಿಂದ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಇವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಅಮೀತ್ ಅತಿಥಿಗಳ ಕಿರುಪರಿಚಯವನ್ನು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ವಹಣೆಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ.ನಡೆಸಿಕೊಟ್ಟರು.
ಕುಮಾರಿ ಚಿಂತನ ವಂದನಾರ್ಪಣೆ ಗೈದರು.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!