ಬೆಳ್ತಂಗಡಿ:ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರಗಿದ 16ನೆ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಹೊಸ ಇತಿಹಾಸ ಸೃಷ್ಟಿಸಿ ದಾಖಲೆ ಬರೆದಿದೆ. ಕಳೆದ 15 ವರ್ಷಗಳಲ್ಲಿ ಸುವರ್ಣ ಆರ್ಕೇಡ್ ಆವರಣದಲ್ಲಿ ಜರಗುತ್ತಿದ್ದ ಕಾರ್ಯಕ್ರಮ ಅಪಾರ ಜನಪ್ರಿಯತೆ ಪಡೆಯುತ್ತ ಜನಸಂದಣಿ ಹೆಚ್ಚಳವಾಗಿ ಕಲಾಭಿಮಾನಿಗಳ ವ್ಯವಸ್ಥಿತ ವೀಕ್ಷಣೆಗೋಸ್ಕಾರ ಮಾರಿಗುಡಿ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿತ್ತು .

ಕುತ್ಯಾರು ಶ್ರೀ ಸೋಮನಾಥಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ಜರಗಬೇಕಿದ್ದ ನಾಟಕ ತಾಂತ್ರಿಕ ಅಡಚಣೆ ಉಂಟಾಗಿ ಮರುದಿನಕ್ಕೆ ಮುಂದೂಡಲಾಗಿತ್ತು, ನಿಗದಿತ ಸಮಯಕ್ಕೆ ಸರಿಯಾಗಿ ನಾಟಕ ಪ್ರಾರಂಭಗೊಂಡು ಅಚ್ಚುಕಟ್ಟಾದ ವ್ಯವಸ್ಥೆ ಮೂಲಕ ಸಹಸ್ರಾರು ಸಂಖ್ಯೆಯ ಕಲಾಭಿಮಾನಿಗಳ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಟಕ ವೀಕ್ಷಿಸಲು ಬಂದ ಜನರಿಂದಾಗಿ ಮಾರಿಗುಡಿ ಮೈದಾನ ಹೌಸ್ ಫುಲ್ ಎನಿಸಿತು. ಸಂಪತ್ ಸುವರ್ಣರವರ ಕಲ್ಪನೆಯ ಸುವರ್ಣ ರಂಗ ಸಮ್ಮಾನ 2026, ಭಾಷಣಗಳಿರದ ಸಭಾ ಕಾರ್ಯಕ್ರಮ ರಹಿತ ನಿರ್ವಹಣೆ, ತುಳುನಾಡ ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ, ಶಿಸ್ತು ಬದ್ಧ ವ್ಯವಸ್ಥಿತ ದಕ್ಷ ಸಂಘಟನೆ ಕುರಿತು ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.











