September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

ಬೆಳ್ತಂಗಡಿ:ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರಗಿದ 16ನೆ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಹೊಸ ಇತಿಹಾಸ ಸೃಷ್ಟಿಸಿ ದಾಖಲೆ ಬರೆದಿದೆ. ಕಳೆದ 15 ವರ್ಷಗಳಲ್ಲಿ ಸುವರ್ಣ ಆರ್ಕೇಡ್ ಆವರಣದಲ್ಲಿ ಜರಗುತ್ತಿದ್ದ ಕಾರ್ಯಕ್ರಮ ಅಪಾರ ಜನಪ್ರಿಯತೆ ಪಡೆಯುತ್ತ ಜನಸಂದಣಿ ಹೆಚ್ಚಳವಾಗಿ ಕಲಾಭಿಮಾನಿಗಳ ವ್ಯವಸ್ಥಿತ ವೀಕ್ಷಣೆಗೋಸ್ಕಾರ ಮಾರಿಗುಡಿ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿತ್ತು .

ಕುತ್ಯಾರು ಶ್ರೀ ಸೋಮನಾಥಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ಜರಗಬೇಕಿದ್ದ ನಾಟಕ ತಾಂತ್ರಿಕ ಅಡಚಣೆ ಉಂಟಾಗಿ ಮರುದಿನಕ್ಕೆ ಮುಂದೂಡಲಾಗಿತ್ತು, ನಿಗದಿತ ಸಮಯಕ್ಕೆ ಸರಿಯಾಗಿ ನಾಟಕ ಪ್ರಾರಂಭಗೊಂಡು ಅಚ್ಚುಕಟ್ಟಾದ ವ್ಯವಸ್ಥೆ ಮೂಲಕ ಸಹಸ್ರಾರು ಸಂಖ್ಯೆಯ ಕಲಾಭಿಮಾನಿಗಳ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಟಕ ವೀಕ್ಷಿಸಲು ಬಂದ ಜನರಿಂದಾಗಿ ಮಾರಿಗುಡಿ ಮೈದಾನ ಹೌಸ್ ಫುಲ್ ಎನಿಸಿತು. ಸಂಪತ್ ಸುವರ್ಣರವರ ಕಲ್ಪನೆಯ ಸುವರ್ಣ ರಂಗ ಸಮ್ಮಾನ 2026, ಭಾಷಣಗಳಿರದ ಸಭಾ ಕಾರ್ಯಕ್ರಮ ರಹಿತ ನಿರ್ವಹಣೆ, ತುಳುನಾಡ ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ, ಶಿಸ್ತು ಬದ್ಧ ವ್ಯವಸ್ಥಿತ ದಕ್ಷ ಸಂಘಟನೆ ಕುರಿತು ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Related posts

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!