22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ತಂಪೆರೆದ ವರುಣ


ಬೆಳ್ತಂಗಡಿ: ಹಗಲಿನಲ್ಲಿ ಸೂರ್ಯನ ತಾಪಕ್ಕೆ ಕಾದಿದ್ದ ಭೂಮಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು.

ನಾರಾವಿ, ಕಾಶಿಪಟ್ಣ, ಕಡಿರುದ್ಯಾವರ, ನಡ, ಕಕ್ಕಿಂಜೆ, ನೆರಿಯ, ನಿಡ್ಲೆ ,ಅರಸಿನಮಕ್ಕಿ, ಚಾರ್ಮಾಡಿಯಲ್ಲಿ ಗುಡುಗು ಸಹಿತ ಮಳೆ ಆಗಿದೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಾವು ಮತ್ತು ಕಾಜೂರು ಧರ್ಮಸ್ಥಳ, ಬಳಂಜ ಪರಿಸರದಲ್ಲಿ ತುಂತುರು ಸಾಧರಣ ಮಳೆಯಾಗಿದೆ. ಗುರುವಾಯನಕೆರೆ, ಮಡಂತ್ಯಾರು, ಬೆಳ್ತಂಗಡಿ ಸಹಿತ ನಾನಾ ಭಾಗದಲ್ಲಿ ಗುಡುಗು ಸಹಿತ ಮೋಡ ಕವಿದ ವಾತವಾರಣವಿದೆ. ಮನೆ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗಳನ್ನು ರಭರಭಸನೆ ತುಂಬಿಸುವ ದೃಶ್ಯಗಳು ಕಂಡು ಬಂದವು.

ಕಕ್ಕಿಂಜೆ ಬಸ್ತಿ ಸಮಿಪ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಬಿಸಿಲ ಝಳಕ್ಕೆ ವರುಣ ತಂಪೆರೆದಿದೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!