September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರದ ಮುಖಾಂತರ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಯಕ್ಷಗಾನ ಹಾಗೂ ಸೆಮಿ ಕ್ಲಾಸಿಕಲ್ ತರಗತಿಗಳು, ಹಾಗೂ ಪಾಶ್ಚಿಮಾತ್ಯ ಶೈಲಿಯ ನೃತ್ಯ ತರಗತಿಗಳು ನಡೆಯುತ್ತಿದ್ದು ಆ ತರಗತಿಯಲ್ಲಿ ವಿದ್ಯಾರ್ಥಿಗಳು ಕಲಿತಂತಹ ಕಲೆಗಳನ್ನು ಅನಾವರಣಗೊಳಿಸುವ ಸಲುವಾಗಿ ಕಲಾಬ್ಧಿ ಎನ್ನುವ ಸಾಂಸ್ಕೃತಿಕ ಸ ಹಬ್ಬವನ್ನು ಆಯೋಜಿಸಲಾಗಿತ್ತು.

ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕ ಗೋವಿಂದ ಭಟ್ ನಿಡ್ಲೆ ರವರು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಧ್ಯಾರ್ಥಿಗಳಿಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು, ವಿದ್ಯೆಯ ಮಹತ್ವ, ಸಂಸ್ಕೃತಿ ಸಂಸ್ಕಾರಗಳ ಅಗತ್ಯ ಎಂಬಿತ್ಯಾದಿ 10 ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಶ್ಚಿಮಾತ್ಯ ಶೈಲಿಯ ನೃತ್ಯ ಪ್ರದರ್ಶನ, ಯಕ್ಷಗಾನ ‘ಸುದರ್ಶನ ವಿಜಯ ‘ ಸೆಮಿ ಕ್ಲಾಸಿಕಲ್ ನೃತ್ಯ ‘ಶ್ರೀ ಕೃಷ್ಣ ಲೀಲಾ ವೈಭವ’ ಅತ್ಯಂತ ಸಂಭ್ರಮದಿಂದ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಇವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಅಮೀತ್ ಅತಿಥಿಗಳ ಕಿರುಪರಿಚಯವನ್ನು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ವಹಣೆಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ.ನಡೆಸಿಕೊಟ್ಟರು.
ಕುಮಾರಿ ಚಿಂತನ ವಂದನಾರ್ಪಣೆ ಗೈದರು.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!