25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರದ ಮುಖಾಂತರ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಯಕ್ಷಗಾನ ಹಾಗೂ ಸೆಮಿ ಕ್ಲಾಸಿಕಲ್ ತರಗತಿಗಳು, ಹಾಗೂ ಪಾಶ್ಚಿಮಾತ್ಯ ಶೈಲಿಯ ನೃತ್ಯ ತರಗತಿಗಳು ನಡೆಯುತ್ತಿದ್ದು ಆ ತರಗತಿಯಲ್ಲಿ ವಿದ್ಯಾರ್ಥಿಗಳು ಕಲಿತಂತಹ ಕಲೆಗಳನ್ನು ಅನಾವರಣಗೊಳಿಸುವ ಸಲುವಾಗಿ ಕಲಾಬ್ಧಿ ಎನ್ನುವ ಸಾಂಸ್ಕೃತಿಕ ಸ ಹಬ್ಬವನ್ನು ಆಯೋಜಿಸಲಾಗಿತ್ತು.

ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕ ಗೋವಿಂದ ಭಟ್ ನಿಡ್ಲೆ ರವರು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಧ್ಯಾರ್ಥಿಗಳಿಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು, ವಿದ್ಯೆಯ ಮಹತ್ವ, ಸಂಸ್ಕೃತಿ ಸಂಸ್ಕಾರಗಳ ಅಗತ್ಯ ಎಂಬಿತ್ಯಾದಿ 10 ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಶ್ಚಿಮಾತ್ಯ ಶೈಲಿಯ ನೃತ್ಯ ಪ್ರದರ್ಶನ, ಯಕ್ಷಗಾನ ‘ಸುದರ್ಶನ ವಿಜಯ ‘ ಸೆಮಿ ಕ್ಲಾಸಿಕಲ್ ನೃತ್ಯ ‘ಶ್ರೀ ಕೃಷ್ಣ ಲೀಲಾ ವೈಭವ’ ಅತ್ಯಂತ ಸಂಭ್ರಮದಿಂದ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಇವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಅಮೀತ್ ಅತಿಥಿಗಳ ಕಿರುಪರಿಚಯವನ್ನು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ವಹಣೆಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ.ನಡೆಸಿಕೊಟ್ಟರು.
ಕುಮಾರಿ ಚಿಂತನ ವಂದನಾರ್ಪಣೆ ಗೈದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya
error: Content is protected !!