July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರದ ಮುಖಾಂತರ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಯಕ್ಷಗಾನ ಹಾಗೂ ಸೆಮಿ ಕ್ಲಾಸಿಕಲ್ ತರಗತಿಗಳು, ಹಾಗೂ ಪಾಶ್ಚಿಮಾತ್ಯ ಶೈಲಿಯ ನೃತ್ಯ ತರಗತಿಗಳು ನಡೆಯುತ್ತಿದ್ದು ಆ ತರಗತಿಯಲ್ಲಿ ವಿದ್ಯಾರ್ಥಿಗಳು ಕಲಿತಂತಹ ಕಲೆಗಳನ್ನು ಅನಾವರಣಗೊಳಿಸುವ ಸಲುವಾಗಿ ಕಲಾಬ್ಧಿ ಎನ್ನುವ ಸಾಂಸ್ಕೃತಿಕ ಸ ಹಬ್ಬವನ್ನು ಆಯೋಜಿಸಲಾಗಿತ್ತು.

ಯಕ್ಷಗಾನ ಕಲಾವಿದರು ಹಾಗೂ ಪ್ರಗತಿಪರ ಕೃಷಿಕ ಗೋವಿಂದ ಭಟ್ ನಿಡ್ಲೆ ರವರು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಧ್ಯಾರ್ಥಿಗಳಿಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು, ವಿದ್ಯೆಯ ಮಹತ್ವ, ಸಂಸ್ಕೃತಿ ಸಂಸ್ಕಾರಗಳ ಅಗತ್ಯ ಎಂಬಿತ್ಯಾದಿ 10 ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಶ್ಚಿಮಾತ್ಯ ಶೈಲಿಯ ನೃತ್ಯ ಪ್ರದರ್ಶನ, ಯಕ್ಷಗಾನ ‘ಸುದರ್ಶನ ವಿಜಯ ‘ ಸೆಮಿ ಕ್ಲಾಸಿಕಲ್ ನೃತ್ಯ ‘ಶ್ರೀ ಕೃಷ್ಣ ಲೀಲಾ ವೈಭವ’ ಅತ್ಯಂತ ಸಂಭ್ರಮದಿಂದ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಇವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಅಮೀತ್ ಅತಿಥಿಗಳ ಕಿರುಪರಿಚಯವನ್ನು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ವಹಣೆಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ.ನಡೆಸಿಕೊಟ್ಟರು.
ಕುಮಾರಿ ಚಿಂತನ ವಂದನಾರ್ಪಣೆ ಗೈದರು.

Related posts

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya
error: Content is protected !!