July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದ ಹಾಗೂ ಸಿಸ್ಟರ್ ಸೌಮ್ಯಾ.ಎಸ್ ಗಂಡು ಮಗುವಿಗೆ ಆಂಬ್ಯುಲೆನ್ಸ್ ವಾಹನದೊಳಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಿನೇಶ್ ಗೌಡ ಅವರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!