26.7 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ:  300 ವರ್ಷಗಳ ಇತಿಹಾಸವುಳ್ಳ 500 ಅಡಿ ಎತ್ತರದ ಎಕಶಿಲೆ ಮೇಲೆ ದಂಪತಿ ಸಮೇತ ( ಶಿವ- ಪಾರ್ವತಿ) ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ  ಡಾ॥ ಡಿ. ವೀರೇಂದ್ರ ಹೆಗ್ಗಡೆಯವರು  ಮಾರ್ಗದರ್ಶನ ದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.1 ರಿಂದ 6 ರವರೆಗೆ ನಡೆಯಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಸೋಮವಾರ ಮಲೆಂಗಲ್ಲು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನುವಂಶೀಯ ಆಡಳಿತ ಮೊಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಕಾರ್ಯದರ್ಶಿ ಜಿತೇಶ್ ಜೈನ್, ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಕಲಶ ಸಮಿತಿ ಸಂಚಾಲಕಿ ಶಾರದಾ ಆರ್ ರೖ ಮುಗೆರೋಡಿ ಹಾಗೂ ಪ್ರಚಾರ ಸಮಿತಿ ಸಂಚಾಲಕ ಪ್ರದೀಪ್ ಶೆಟ್ಟಿ ಮಲೆಂಗಲ್ಲು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಕಲಶೊತ್ಸವ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು ಸ್ವಾಗತಿಸಿದರು.

Related posts

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya
error: Content is protected !!