25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಂಸ್ಥಾಪಕರ ದಿನಾಚರಣೆ ಹಾಗೂ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯನ್ನು ದಳದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಬುಲ್ ಬುಲ್ ವಿದ್ಯಾರ್ಥಿ ಧಾತ್ರಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಅಲ್ಲದೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಪ್ರಮೀಳಾ ಪೂಜಾರಿ ದಿನದ ಮಹತ್ವ ಹಾಗೂ ಸ್ಕೌಟ್ ಗೈಡ್ಸ್ ನ ಉಗಮ ಹೇಗಾಯಿತು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು ಬೆಂಕಿ ಇಲ್ಲದ ಅಡುಗೆಯನ್ನು ತಯಾರಿಸಿದರು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಪ್ರಮೀಳಾ ಪೂಜಾರಿ ಸಂಘಟಿಸಿದರು.
ಸ್ಕೌಟ್ ಗೈಡ್ ಶಿಕ್ಷಕರಾದ ಕಾರುಣ್ಯ, ಮಂಜುನಾಥ್, ರಮ್ಯಾ ಬಿ ಎಸ್, ನೀತಾ ಕೆ ಎಸ್, ಸೌಮ್ಯ ಪಿ, ಪುಷ್ಪಲತಾ, ಮೋಹಿನಿ, ಜಯಲಕ್ಷ್ಮಿ, ಗೀತ ಪಿ, ಅಮಿತ ಸಹಕರಿಸಿದರು. ಶಾಲಾ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya
error: Content is protected !!