July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಂಸ್ಥಾಪಕರ ದಿನಾಚರಣೆ ಹಾಗೂ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯನ್ನು ದಳದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಬುಲ್ ಬುಲ್ ವಿದ್ಯಾರ್ಥಿ ಧಾತ್ರಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಅಲ್ಲದೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಪ್ರಮೀಳಾ ಪೂಜಾರಿ ದಿನದ ಮಹತ್ವ ಹಾಗೂ ಸ್ಕೌಟ್ ಗೈಡ್ಸ್ ನ ಉಗಮ ಹೇಗಾಯಿತು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು ಬೆಂಕಿ ಇಲ್ಲದ ಅಡುಗೆಯನ್ನು ತಯಾರಿಸಿದರು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಪ್ರಮೀಳಾ ಪೂಜಾರಿ ಸಂಘಟಿಸಿದರು.
ಸ್ಕೌಟ್ ಗೈಡ್ ಶಿಕ್ಷಕರಾದ ಕಾರುಣ್ಯ, ಮಂಜುನಾಥ್, ರಮ್ಯಾ ಬಿ ಎಸ್, ನೀತಾ ಕೆ ಎಸ್, ಸೌಮ್ಯ ಪಿ, ಪುಷ್ಪಲತಾ, ಮೋಹಿನಿ, ಜಯಲಕ್ಷ್ಮಿ, ಗೀತ ಪಿ, ಅಮಿತ ಸಹಕರಿಸಿದರು. ಶಾಲಾ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
error: Content is protected !!