ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ ಮಂಜುಶ್ರೀನಗರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಂಡಾಜೆ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ ಫೆ.22 ರಂದು ಮುಂಡಾಜೆ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ನಾರಾಯಣ ಶೆಟ್ಟಿ ಮುಂಡಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಭಜನಾ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ ನ ಜಿಲ್ಲಾ ಸಂಯೋಜಕ ಸಂತೋಷ್ ಅಳಿಯೂರು , ವಲಯ ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ ಉಪಸ್ಥಿತರಿದ್ದರು.

ಮೇಲ್ವಿಚಾರಕರಾದ ಜನಾರ್ದನ್, ಸೇವಾಪ್ರತಿನಿಧಿಗಳಾದ ಲೀಲಾವತಿ ,ಸರಿತಾ ಪ್ರವೀಣ್, ಒಕ್ಕೂಟದ ಅಧ್ಯಕ್ಷೆ ಶಕುಂತಳಾ ಸತೀಶ್ ನಾಯ್ಕ ಉಪಸ್ಥಿತರಿದ್ದರು.

ರೇವತಿ ದಿನೇಶ್ ಆಚಾರ್ಯ ಸ್ವಾಗತಿಸಿ, ಸದಾನಂದ ಬಿ. ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ರಂಜಿನಿ ಧನ್ಯವಾದವಿತ್ತರು. ಕಾರ್ಯದರ್ಶಿ ಉಮೇಶ್ ಆಚಾರ್ಯ , ಪದಾಧಿಕಾರಿಗಳಾದ ಉಮೇಶ್ ಪೂಜಾರಿ, ಪ್ರಮೋದ್, ಚಂದ್ರಶೇಖರ ಗೌಡ, ಗುಲಾಬಿ, ಪೂರ್ಣಿಮಾ, ಪ್ರೀತಿ ಸಹಕರಿಸಿದರು. ಸತ್ಯನಾರಾಯಣ ಹೊಳ್ಳ ಪೂಜೆಯನ್ನು ನೆರವೇರಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
error: Content is protected !!