25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

ಮುಂಡಾಜೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಸುಲೈಮಾನ್ ಬೆಳಾಲು ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ನಾಗೇಶ್ ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನದ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಣ್ಣು ಮಾದರಿಯ ಮಹತ್ವ ತಿಳಿಸಿದರು.

ಉಜಿರೆ ಗ್ರಾಮದ ಕೃಷಿ ಸಖಿ ಪ್ರಾಸ್ತಾವಿಕವಾಗಿ ಮಾತನಾಡಿ ರೈತ ತರಬೇತಿಯ ಉದ್ದೇಶಗಳು ವೈಜ್ಞಾನಿಕವಾಗಿ ಕೃಷಿ ಮಾಡುವ ವಿಧಾನ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಎಡಿಎ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು ಎಲ್‌ಸಿಆರ್‌ಪಿ ಪುಷ್ಪಾವತಿ ಸ್ವಾಗತಿಸಿದರು. ಎಂಬಿಕೆ ಮೀನಾ ಧನ್ಯವಾದ ನೀಡಿದರು

Related posts

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya
error: Content is protected !!