28.2 C
ಪುತ್ತೂರು, ಬೆಳ್ತಂಗಡಿ
September 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

ಮುಂಡಾಜೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಸುಲೈಮಾನ್ ಬೆಳಾಲು ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ನಾಗೇಶ್ ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನದ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಣ್ಣು ಮಾದರಿಯ ಮಹತ್ವ ತಿಳಿಸಿದರು.

ಉಜಿರೆ ಗ್ರಾಮದ ಕೃಷಿ ಸಖಿ ಪ್ರಾಸ್ತಾವಿಕವಾಗಿ ಮಾತನಾಡಿ ರೈತ ತರಬೇತಿಯ ಉದ್ದೇಶಗಳು ವೈಜ್ಞಾನಿಕವಾಗಿ ಕೃಷಿ ಮಾಡುವ ವಿಧಾನ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಎಡಿಎ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು ಎಲ್‌ಸಿಆರ್‌ಪಿ ಪುಷ್ಪಾವತಿ ಸ್ವಾಗತಿಸಿದರು. ಎಂಬಿಕೆ ಮೀನಾ ಧನ್ಯವಾದ ನೀಡಿದರು

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya
error: Content is protected !!