July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದ ಹಾಗೂ ಸಿಸ್ಟರ್ ಸೌಮ್ಯಾ.ಎಸ್ ಗಂಡು ಮಗುವಿಗೆ ಆಂಬ್ಯುಲೆನ್ಸ್ ವಾಹನದೊಳಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಿನೇಶ್ ಗೌಡ ಅವರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Related posts

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!