25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದ ಹಾಗೂ ಸಿಸ್ಟರ್ ಸೌಮ್ಯಾ.ಎಸ್ ಗಂಡು ಮಗುವಿಗೆ ಆಂಬ್ಯುಲೆನ್ಸ್ ವಾಹನದೊಳಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಿನೇಶ್ ಗೌಡ ಅವರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Related posts

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!