July 23, 2026
ಧಾರ್ಮಿಕವರದಿ

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ:  300 ವರ್ಷಗಳ ಇತಿಹಾಸವುಳ್ಳ 500 ಅಡಿ ಎತ್ತರದ ಎಕಶಿಲೆ ಮೇಲೆ ದಂಪತಿ ಸಮೇತ ( ಶಿವ- ಪಾರ್ವತಿ) ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ  ಡಾ॥ ಡಿ. ವೀರೇಂದ್ರ ಹೆಗ್ಗಡೆಯವರು  ಮಾರ್ಗದರ್ಶನ ದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.1 ರಿಂದ 6 ರವರೆಗೆ ನಡೆಯಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಸೋಮವಾರ ಮಲೆಂಗಲ್ಲು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನುವಂಶೀಯ ಆಡಳಿತ ಮೊಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಕಾರ್ಯದರ್ಶಿ ಜಿತೇಶ್ ಜೈನ್, ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಕಲಶ ಸಮಿತಿ ಸಂಚಾಲಕಿ ಶಾರದಾ ಆರ್ ರೖ ಮುಗೆರೋಡಿ ಹಾಗೂ ಪ್ರಚಾರ ಸಮಿತಿ ಸಂಚಾಲಕ ಪ್ರದೀಪ್ ಶೆಟ್ಟಿ ಮಲೆಂಗಲ್ಲು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಕಲಶೊತ್ಸವ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು ಸ್ವಾಗತಿಸಿದರು.

Related posts

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!