ಧಾರ್ಮಿಕವರದಿ

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ:  300 ವರ್ಷಗಳ ಇತಿಹಾಸವುಳ್ಳ 500 ಅಡಿ ಎತ್ತರದ ಎಕಶಿಲೆ ಮೇಲೆ ದಂಪತಿ ಸಮೇತ ( ಶಿವ- ಪಾರ್ವತಿ) ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ  ಡಾ॥ ಡಿ. ವೀರೇಂದ್ರ ಹೆಗ್ಗಡೆಯವರು  ಮಾರ್ಗದರ್ಶನ ದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.1 ರಿಂದ 6 ರವರೆಗೆ ನಡೆಯಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಸೋಮವಾರ ಮಲೆಂಗಲ್ಲು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನುವಂಶೀಯ ಆಡಳಿತ ಮೊಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಕಾರ್ಯದರ್ಶಿ ಜಿತೇಶ್ ಜೈನ್, ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಕಲಶ ಸಮಿತಿ ಸಂಚಾಲಕಿ ಶಾರದಾ ಆರ್ ರೖ ಮುಗೆರೋಡಿ ಹಾಗೂ ಪ್ರಚಾರ ಸಮಿತಿ ಸಂಚಾಲಕ ಪ್ರದೀಪ್ ಶೆಟ್ಟಿ ಮಲೆಂಗಲ್ಲು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಕಲಶೊತ್ಸವ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು ಸ್ವಾಗತಿಸಿದರು.

Related posts

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya
error: Content is protected !!