July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೊಕ್ಕಡ ಗ್ರಾಮದ ಕೃಷಿಕರಿಂದ ಫೆ.23ರಂದು ಮನವಿ ನೀಡಲಾಯಿತು.

ಕೊಕ್ಕಡ ಗ್ರಾಮದ ಕೃಷಿಕರು ಕೊಕ್ಕಡ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮೂಲಕ ಟಾಟಾ ಐಜಿ ಎಂಬ ಸಂಸ್ಥೆಯಲ್ಲಿ ಬೆಳೆ ವಿಮೆ ಹಣವನ್ನು ಪಾವತಿಸಿದ್ದು 2025 ನೇ ವರ್ಷ ವಿಪರೀತ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೆಪ್ಟೆಂಬರ್/ ಅಕ್ಟೋಬರ್ ನಲ್ಲಿ ಬರಬೇಕಾಗಿದ್ದ ವಿಮಾ ಹಣ ಇನ್ನೂ ಕೂಡ ಬಂದಿರುವುದಿಲ್ಲ. ರೈತರು ತಮ್ಮ ಸಾಲ ಮರುಪಾವತಿಗಾಗಿ ಈ ಹಣವನ್ನು ನಂಬಿದ್ದು ಬೆಳೆ ವಿಮೆ ಬಾರದಿರುವುದರಿಂದ ಕೃಷಿಕರಿಗೆ ಆತ್ಮಹತ್ಯೆಯೇ ದಾರಿಯಂತಾಗಿದೆ. ತಾಲೂಕು ಹಂತದ ವಿಮಾ ಅಧಿಕಾರಿಗಳಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ಕಾರ ಬೆಳೆವಿಮೆ ಹಣವನ್ನು ತಡೆ ಹಿಡಿದಿದೆ ಎಂದು ಹೇಳುತ್ತಾರೆ. ಕೂಡಲೇ ಈ ಕುರಿತು ತಾವುಗಳು ಸೂಕ್ತ ಗಮನಹರಿಸಿ ಒಂದು ವಾರದೊಳಗೆ ಕೊಕ್ಕಡ ಗ್ರಾಮದ ಎಲ್ಲಾ ಕೃಷಿಕರ ಬೆಳೆವಿಮೆ ಯನ್ನು ನೀಡುವಂತೆ ಹಾಗೂ ಒಂದು ವೇಳೆ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮಾ.8 ರಂದು ಕೊಕ್ಕಡದಿಂದ ಹಾದು ಹೋಗುವ ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಯಂ ಪ್ರೇರಿತವಾಗಿ ರಸ್ತೆ ತಡೆ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Related posts

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
error: Content is protected !!