37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೊಕ್ಕಡ ಗ್ರಾಮದ ಕೃಷಿಕರಿಂದ ಫೆ.23ರಂದು ಮನವಿ ನೀಡಲಾಯಿತು.

ಕೊಕ್ಕಡ ಗ್ರಾಮದ ಕೃಷಿಕರು ಕೊಕ್ಕಡ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮೂಲಕ ಟಾಟಾ ಐಜಿ ಎಂಬ ಸಂಸ್ಥೆಯಲ್ಲಿ ಬೆಳೆ ವಿಮೆ ಹಣವನ್ನು ಪಾವತಿಸಿದ್ದು 2025 ನೇ ವರ್ಷ ವಿಪರೀತ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೆಪ್ಟೆಂಬರ್/ ಅಕ್ಟೋಬರ್ ನಲ್ಲಿ ಬರಬೇಕಾಗಿದ್ದ ವಿಮಾ ಹಣ ಇನ್ನೂ ಕೂಡ ಬಂದಿರುವುದಿಲ್ಲ. ರೈತರು ತಮ್ಮ ಸಾಲ ಮರುಪಾವತಿಗಾಗಿ ಈ ಹಣವನ್ನು ನಂಬಿದ್ದು ಬೆಳೆ ವಿಮೆ ಬಾರದಿರುವುದರಿಂದ ಕೃಷಿಕರಿಗೆ ಆತ್ಮಹತ್ಯೆಯೇ ದಾರಿಯಂತಾಗಿದೆ. ತಾಲೂಕು ಹಂತದ ವಿಮಾ ಅಧಿಕಾರಿಗಳಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ಕಾರ ಬೆಳೆವಿಮೆ ಹಣವನ್ನು ತಡೆ ಹಿಡಿದಿದೆ ಎಂದು ಹೇಳುತ್ತಾರೆ. ಕೂಡಲೇ ಈ ಕುರಿತು ತಾವುಗಳು ಸೂಕ್ತ ಗಮನಹರಿಸಿ ಒಂದು ವಾರದೊಳಗೆ ಕೊಕ್ಕಡ ಗ್ರಾಮದ ಎಲ್ಲಾ ಕೃಷಿಕರ ಬೆಳೆವಿಮೆ ಯನ್ನು ನೀಡುವಂತೆ ಹಾಗೂ ಒಂದು ವೇಳೆ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮಾ.8 ರಂದು ಕೊಕ್ಕಡದಿಂದ ಹಾದು ಹೋಗುವ ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಯಂ ಪ್ರೇರಿತವಾಗಿ ರಸ್ತೆ ತಡೆ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!