July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೊಕ್ಕಡ ಗ್ರಾಮದ ಕೃಷಿಕರಿಂದ ಫೆ.23ರಂದು ಮನವಿ ನೀಡಲಾಯಿತು.

ಕೊಕ್ಕಡ ಗ್ರಾಮದ ಕೃಷಿಕರು ಕೊಕ್ಕಡ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮೂಲಕ ಟಾಟಾ ಐಜಿ ಎಂಬ ಸಂಸ್ಥೆಯಲ್ಲಿ ಬೆಳೆ ವಿಮೆ ಹಣವನ್ನು ಪಾವತಿಸಿದ್ದು 2025 ನೇ ವರ್ಷ ವಿಪರೀತ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೆಪ್ಟೆಂಬರ್/ ಅಕ್ಟೋಬರ್ ನಲ್ಲಿ ಬರಬೇಕಾಗಿದ್ದ ವಿಮಾ ಹಣ ಇನ್ನೂ ಕೂಡ ಬಂದಿರುವುದಿಲ್ಲ. ರೈತರು ತಮ್ಮ ಸಾಲ ಮರುಪಾವತಿಗಾಗಿ ಈ ಹಣವನ್ನು ನಂಬಿದ್ದು ಬೆಳೆ ವಿಮೆ ಬಾರದಿರುವುದರಿಂದ ಕೃಷಿಕರಿಗೆ ಆತ್ಮಹತ್ಯೆಯೇ ದಾರಿಯಂತಾಗಿದೆ. ತಾಲೂಕು ಹಂತದ ವಿಮಾ ಅಧಿಕಾರಿಗಳಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ಕಾರ ಬೆಳೆವಿಮೆ ಹಣವನ್ನು ತಡೆ ಹಿಡಿದಿದೆ ಎಂದು ಹೇಳುತ್ತಾರೆ. ಕೂಡಲೇ ಈ ಕುರಿತು ತಾವುಗಳು ಸೂಕ್ತ ಗಮನಹರಿಸಿ ಒಂದು ವಾರದೊಳಗೆ ಕೊಕ್ಕಡ ಗ್ರಾಮದ ಎಲ್ಲಾ ಕೃಷಿಕರ ಬೆಳೆವಿಮೆ ಯನ್ನು ನೀಡುವಂತೆ ಹಾಗೂ ಒಂದು ವೇಳೆ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮಾ.8 ರಂದು ಕೊಕ್ಕಡದಿಂದ ಹಾದು ಹೋಗುವ ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಯಂ ಪ್ರೇರಿತವಾಗಿ ರಸ್ತೆ ತಡೆ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Related posts

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!