23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೊಕ್ಕಡ ಗ್ರಾಮದ ಕೃಷಿಕರಿಂದ ಫೆ.23ರಂದು ಮನವಿ ನೀಡಲಾಯಿತು.

ಕೊಕ್ಕಡ ಗ್ರಾಮದ ಕೃಷಿಕರು ಕೊಕ್ಕಡ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮೂಲಕ ಟಾಟಾ ಐಜಿ ಎಂಬ ಸಂಸ್ಥೆಯಲ್ಲಿ ಬೆಳೆ ವಿಮೆ ಹಣವನ್ನು ಪಾವತಿಸಿದ್ದು 2025 ನೇ ವರ್ಷ ವಿಪರೀತ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೆಪ್ಟೆಂಬರ್/ ಅಕ್ಟೋಬರ್ ನಲ್ಲಿ ಬರಬೇಕಾಗಿದ್ದ ವಿಮಾ ಹಣ ಇನ್ನೂ ಕೂಡ ಬಂದಿರುವುದಿಲ್ಲ. ರೈತರು ತಮ್ಮ ಸಾಲ ಮರುಪಾವತಿಗಾಗಿ ಈ ಹಣವನ್ನು ನಂಬಿದ್ದು ಬೆಳೆ ವಿಮೆ ಬಾರದಿರುವುದರಿಂದ ಕೃಷಿಕರಿಗೆ ಆತ್ಮಹತ್ಯೆಯೇ ದಾರಿಯಂತಾಗಿದೆ. ತಾಲೂಕು ಹಂತದ ವಿಮಾ ಅಧಿಕಾರಿಗಳಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ಕಾರ ಬೆಳೆವಿಮೆ ಹಣವನ್ನು ತಡೆ ಹಿಡಿದಿದೆ ಎಂದು ಹೇಳುತ್ತಾರೆ. ಕೂಡಲೇ ಈ ಕುರಿತು ತಾವುಗಳು ಸೂಕ್ತ ಗಮನಹರಿಸಿ ಒಂದು ವಾರದೊಳಗೆ ಕೊಕ್ಕಡ ಗ್ರಾಮದ ಎಲ್ಲಾ ಕೃಷಿಕರ ಬೆಳೆವಿಮೆ ಯನ್ನು ನೀಡುವಂತೆ ಹಾಗೂ ಒಂದು ವೇಳೆ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮಾ.8 ರಂದು ಕೊಕ್ಕಡದಿಂದ ಹಾದು ಹೋಗುವ ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಯಂ ಪ್ರೇರಿತವಾಗಿ ರಸ್ತೆ ತಡೆ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Related posts

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!