September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೊಕ್ಕಡ ಗ್ರಾಮದ ಕೃಷಿಕರಿಂದ ಫೆ.23ರಂದು ಮನವಿ ನೀಡಲಾಯಿತು.

ಕೊಕ್ಕಡ ಗ್ರಾಮದ ಕೃಷಿಕರು ಕೊಕ್ಕಡ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮೂಲಕ ಟಾಟಾ ಐಜಿ ಎಂಬ ಸಂಸ್ಥೆಯಲ್ಲಿ ಬೆಳೆ ವಿಮೆ ಹಣವನ್ನು ಪಾವತಿಸಿದ್ದು 2025 ನೇ ವರ್ಷ ವಿಪರೀತ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೆಪ್ಟೆಂಬರ್/ ಅಕ್ಟೋಬರ್ ನಲ್ಲಿ ಬರಬೇಕಾಗಿದ್ದ ವಿಮಾ ಹಣ ಇನ್ನೂ ಕೂಡ ಬಂದಿರುವುದಿಲ್ಲ. ರೈತರು ತಮ್ಮ ಸಾಲ ಮರುಪಾವತಿಗಾಗಿ ಈ ಹಣವನ್ನು ನಂಬಿದ್ದು ಬೆಳೆ ವಿಮೆ ಬಾರದಿರುವುದರಿಂದ ಕೃಷಿಕರಿಗೆ ಆತ್ಮಹತ್ಯೆಯೇ ದಾರಿಯಂತಾಗಿದೆ. ತಾಲೂಕು ಹಂತದ ವಿಮಾ ಅಧಿಕಾರಿಗಳಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸರ್ಕಾರ ಬೆಳೆವಿಮೆ ಹಣವನ್ನು ತಡೆ ಹಿಡಿದಿದೆ ಎಂದು ಹೇಳುತ್ತಾರೆ. ಕೂಡಲೇ ಈ ಕುರಿತು ತಾವುಗಳು ಸೂಕ್ತ ಗಮನಹರಿಸಿ ಒಂದು ವಾರದೊಳಗೆ ಕೊಕ್ಕಡ ಗ್ರಾಮದ ಎಲ್ಲಾ ಕೃಷಿಕರ ಬೆಳೆವಿಮೆ ಯನ್ನು ನೀಡುವಂತೆ ಹಾಗೂ ಒಂದು ವೇಳೆ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮಾ.8 ರಂದು ಕೊಕ್ಕಡದಿಂದ ಹಾದು ಹೋಗುವ ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಯಂ ಪ್ರೇರಿತವಾಗಿ ರಸ್ತೆ ತಡೆ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!