July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದ ಹಾಗೂ ಸಿಸ್ಟರ್ ಸೌಮ್ಯಾ.ಎಸ್ ಗಂಡು ಮಗುವಿಗೆ ಆಂಬ್ಯುಲೆನ್ಸ್ ವಾಹನದೊಳಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಿನೇಶ್ ಗೌಡ ಅವರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya
error: Content is protected !!