22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಂಸ್ಥಾಪಕರ ದಿನಾಚರಣೆ ಹಾಗೂ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯನ್ನು ದಳದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಬುಲ್ ಬುಲ್ ವಿದ್ಯಾರ್ಥಿ ಧಾತ್ರಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಅಲ್ಲದೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಪ್ರಮೀಳಾ ಪೂಜಾರಿ ದಿನದ ಮಹತ್ವ ಹಾಗೂ ಸ್ಕೌಟ್ ಗೈಡ್ಸ್ ನ ಉಗಮ ಹೇಗಾಯಿತು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು ಬೆಂಕಿ ಇಲ್ಲದ ಅಡುಗೆಯನ್ನು ತಯಾರಿಸಿದರು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಪ್ರಮೀಳಾ ಪೂಜಾರಿ ಸಂಘಟಿಸಿದರು.
ಸ್ಕೌಟ್ ಗೈಡ್ ಶಿಕ್ಷಕರಾದ ಕಾರುಣ್ಯ, ಮಂಜುನಾಥ್, ರಮ್ಯಾ ಬಿ ಎಸ್, ನೀತಾ ಕೆ ಎಸ್, ಸೌಮ್ಯ ಪಿ, ಪುಷ್ಪಲತಾ, ಮೋಹಿನಿ, ಜಯಲಕ್ಷ್ಮಿ, ಗೀತ ಪಿ, ಅಮಿತ ಸಹಕರಿಸಿದರು. ಶಾಲಾ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!