July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ ಮಂಜುಶ್ರೀನಗರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಂಡಾಜೆ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ ಫೆ.22 ರಂದು ಮುಂಡಾಜೆ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ನಾರಾಯಣ ಶೆಟ್ಟಿ ಮುಂಡಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಭಜನಾ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ ನ ಜಿಲ್ಲಾ ಸಂಯೋಜಕ ಸಂತೋಷ್ ಅಳಿಯೂರು , ವಲಯ ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ ಉಪಸ್ಥಿತರಿದ್ದರು.

ಮೇಲ್ವಿಚಾರಕರಾದ ಜನಾರ್ದನ್, ಸೇವಾಪ್ರತಿನಿಧಿಗಳಾದ ಲೀಲಾವತಿ ,ಸರಿತಾ ಪ್ರವೀಣ್, ಒಕ್ಕೂಟದ ಅಧ್ಯಕ್ಷೆ ಶಕುಂತಳಾ ಸತೀಶ್ ನಾಯ್ಕ ಉಪಸ್ಥಿತರಿದ್ದರು.

ರೇವತಿ ದಿನೇಶ್ ಆಚಾರ್ಯ ಸ್ವಾಗತಿಸಿ, ಸದಾನಂದ ಬಿ. ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ರಂಜಿನಿ ಧನ್ಯವಾದವಿತ್ತರು. ಕಾರ್ಯದರ್ಶಿ ಉಮೇಶ್ ಆಚಾರ್ಯ , ಪದಾಧಿಕಾರಿಗಳಾದ ಉಮೇಶ್ ಪೂಜಾರಿ, ಪ್ರಮೋದ್, ಚಂದ್ರಶೇಖರ ಗೌಡ, ಗುಲಾಬಿ, ಪೂರ್ಣಿಮಾ, ಪ್ರೀತಿ ಸಹಕರಿಸಿದರು. ಸತ್ಯನಾರಾಯಣ ಹೊಳ್ಳ ಪೂಜೆಯನ್ನು ನೆರವೇರಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!