25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

ಮುಂಡಾಜೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಸುಲೈಮಾನ್ ಬೆಳಾಲು ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ನಾಗೇಶ್ ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನದ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಣ್ಣು ಮಾದರಿಯ ಮಹತ್ವ ತಿಳಿಸಿದರು.

ಉಜಿರೆ ಗ್ರಾಮದ ಕೃಷಿ ಸಖಿ ಪ್ರಾಸ್ತಾವಿಕವಾಗಿ ಮಾತನಾಡಿ ರೈತ ತರಬೇತಿಯ ಉದ್ದೇಶಗಳು ವೈಜ್ಞಾನಿಕವಾಗಿ ಕೃಷಿ ಮಾಡುವ ವಿಧಾನ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಎಡಿಎ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು ಎಲ್‌ಸಿಆರ್‌ಪಿ ಪುಷ್ಪಾವತಿ ಸ್ವಾಗತಿಸಿದರು. ಎಂಬಿಕೆ ಮೀನಾ ಧನ್ಯವಾದ ನೀಡಿದರು

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!