September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

ಪುದುವೆಟ್ಟು : ಪುದುವೆಟ್ಟು ಗ್ರಾಮದ ನಿಡ್ವಾಳ ಬಸದಿಯಲ್ಲಿ ಭಾನುವಾರ ಕೇವಲಜ್ಞಾನ ಕಲ್ಯಾಣ, ಸಮವಸರಣ ಪೂಜೆ, ಭವ್ಯ ಅಗ್ರೋಧಕ ಮೆರವಣಿಗೆ ಬಳಿಕ ಸಹಸ್ರಫಣಿ ಪಾರ್ಶ್ವನಾಥ ಸ್ವಾಮಿ ಮೂರ್ತಿಗೆ 1008 ಕಲಶಗಳಿಂದ ಅಭಿಷೇಕ ಹಾಗೂ ಮಹಾಮಂಗಲಾರತಿಯೊಂದಿಗೆ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನಗೊಂಡಿತು.

ಪೂಜ್ಯ ಏಲಾಚಾರ್ಯ ಪ್ರಸಂಗ ಸಾಗರ ಮುನಿಮಹಾರಾಜರು ಮತ್ತು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆದವು.
ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಉಪದೇಶಾಮೃತ ನೀಡುವ ಧರ್ಮಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ.

ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಜಯರಾಜ ಇಂದ್ರರು ಮತ್ತು ಧರಣೇಂದ್ರ ಕುಮಾರ್ ಹಾಗೂ ಸ್ಥಳ ಪುರೋಹಿತರಾದ ಶ್ರೀಕೀರ್ತಿ ಇಂದ್ರರು, ಬೈಲಂಗಡಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಧರ್ಮಸ್ಥಳದ ಕೋಟ್ಯಣ್ಣ ಬಂಟರಾದ ಸುರೇಂದ್ರಕುಮಾರ್ ಜೈನ್, ಪಂಚಕಲ್ಯಾಣ ಮಹೋತ್ಸವ ಸಮಿತಿಯ ಅಧ್ಯಕ್ಷ ಡಿ. ಧನಕೀರ್ತಿ ಆರಿಗ, ಉಪಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ಚಂದ್ರನಾಥ ಜೈನ್, ಸಂಚಾಲಕ ಜಯವರ್ಮ ಕಾಜವ ಮತ್ತು ಕೋಶಾಧಿಕಾರಿ ಅಜಯ್ ಕುಮಾರ್ ಹಾಗೂ ಸದಸ್ಯರು ಮತ್ತು ಊರಿನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದು ಸಮಾರಂಭದ ಯಶಸ್ವಿಗೆ ಸಹಕರಿಸಿದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!