23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya
error: Content is protected !!