26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!