July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!