ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಹಾಗೂ ಬೆಳ್ತಂಗಡಿ ಪ್ರಭಾರ ಕಾರ್ಮಿಕ ನಿರೀಕ್ಷಕರಾದ ವೀರೇಂದ್ರ ಕಂಬಾರ್ ಉಪಸ್ಥಿತರಿದ್ದರು.

ಹಲವಾರು ಕಾರ್ಮಿಕರು ವ್ರದ್ಧಾಪ್ಯ ಪಿಂಚಣಿ, ಮದುವೆ , ಮರಣ ಸಹಾಯಧನ, ಕುಟುಂಬ ಪಿಂಚಣಿ ಹಾಗೂ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬರದಿರುವ ಕುರಿತು ಕಾರ್ಮಿಕರು ಶಾಸಕರಲ್ಲಿ ದೂರು ನೀಡಿದರು. ಈ ಸಂದರ್ಭ ವಿವರವಾಗಿ ಶಾಸಕರು ಈ ಬಗ್ಗೆ‌ ಮಾಹಿತಿ ಪಡೆದುಕೊಂಡು ಕಾರ್ಮಿಕ ಅಧಿಕಾರಿಗಳಿಗೆ ಸೂಕ್ತ ಪರಿಹಾರವನ್ನು ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜೈ ರಾಜ್ ಸಾಲಿಯಾನ್ ಕಾನರ್ಪ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ತಾಲೂಕು ಅಧ್ಯಕ್ಷ ಉದಯ ಬಿಕೆ, ತಾಲೂಕು ಸಂಯೋಜಕ ಶಾಂತಪ್ಪ ಕಲ್ಮಂಜ, ಬಿಎಂಎಸ್ ಪ್ರಮುಖರಾದ ಗಣೇಶ್ ಪೂಜಾರಿ ಪೆರಾಡಿ, ಉದಯ್ ಕುಮಾರ್ ಉಜಿರೆ ಹಾಗೂ ಇನ್ನಿತರ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!