July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಹಾಗೂ ಬೆಳ್ತಂಗಡಿ ಪ್ರಭಾರ ಕಾರ್ಮಿಕ ನಿರೀಕ್ಷಕರಾದ ವೀರೇಂದ್ರ ಕಂಬಾರ್ ಉಪಸ್ಥಿತರಿದ್ದರು.

ಹಲವಾರು ಕಾರ್ಮಿಕರು ವ್ರದ್ಧಾಪ್ಯ ಪಿಂಚಣಿ, ಮದುವೆ , ಮರಣ ಸಹಾಯಧನ, ಕುಟುಂಬ ಪಿಂಚಣಿ ಹಾಗೂ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬರದಿರುವ ಕುರಿತು ಕಾರ್ಮಿಕರು ಶಾಸಕರಲ್ಲಿ ದೂರು ನೀಡಿದರು. ಈ ಸಂದರ್ಭ ವಿವರವಾಗಿ ಶಾಸಕರು ಈ ಬಗ್ಗೆ‌ ಮಾಹಿತಿ ಪಡೆದುಕೊಂಡು ಕಾರ್ಮಿಕ ಅಧಿಕಾರಿಗಳಿಗೆ ಸೂಕ್ತ ಪರಿಹಾರವನ್ನು ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜೈ ರಾಜ್ ಸಾಲಿಯಾನ್ ಕಾನರ್ಪ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ತಾಲೂಕು ಅಧ್ಯಕ್ಷ ಉದಯ ಬಿಕೆ, ತಾಲೂಕು ಸಂಯೋಜಕ ಶಾಂತಪ್ಪ ಕಲ್ಮಂಜ, ಬಿಎಂಎಸ್ ಪ್ರಮುಖರಾದ ಗಣೇಶ್ ಪೂಜಾರಿ ಪೆರಾಡಿ, ಉದಯ್ ಕುಮಾರ್ ಉಜಿರೆ ಹಾಗೂ ಇನ್ನಿತರ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!