September 6, 2026
ವರದಿ

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ನಿನ್ನೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಿದ್ದು ಗಮನಾರ್ಹವಾಗಿದೆ.ಸಭೆಯಲ್ಲಿ ಕೆಲವೊಂದು ಕಾರ್ಮಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲ್ಪಟ್ಟಿದ್ದು, ಬಾಕಿ ಇರುವ ಪ್ರಕರಣಗಳ ಕುರಿತು ಮೇಲಾಧಿಕಾರಿಗಳ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಬಿಎಮ್‌ಎಸ್ ಪ್ರಮುಖರನ್ನು ಸೇರಿಸಿಕೊಂಡು ಅವರ ಸಮ್ಮುಖದಲ್ಲೇ ಸಮಗ್ರ ಪರಿಹಾರ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದಕ್ಕಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸ್ವತಃ ಮಾಡುವುದಾಗಿ ಅವರು ತಿಳಿಸಿರುವುದು ಕಾರ್ಮಿಕರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಮ್‌ಎಸ್ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು, ನಮ್ಮ ಶಾಸಕರು ಕಾರ್ಮಿಕರ ಪರ ತಮ್ಮ ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ. ಬಿಎಮ್‌ಎಸ್ ಸದಾ ಶಾಸಕರೊಂದಿಗೆ ಕೈಜೋಡಿಸಿ ಕಾರ್ಮಿಕರ ಹಿತಾಸಕ್ತಿಗೆ ಕೆಲಸ ಮಾಡುತ್ತದೆ. ನಮ್ಮ ಶಾಸಕರೂ ಕಾರ್ಮಿಕರ ಪರ ಸದಾ ನಿಲ್ಲಬೇಕು ಎಂಬುದು ನಮ್ಮ ಮನದಾಳದ ನಿರೀಕ್ಷೆ, ಎಂದು ತಿಳಿಸಿದ್ದಾರೆ. ಸಭೆಯ ಈ ಬೆಳವಣಿಗೆ ಬೆಳ್ತಂಗಡಿ ತಾಲೂಕಿನ ಕಾರ್ಮಿಕರಿಗೆ ಆಶಾಭಾವನೆಯ ಸಂದೇಶ ನೀಡಿದೆ.

Related posts

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya
error: Content is protected !!