September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಸ್ಕೌಟ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಬಳಿಕ ಸ್ಕೌಟ್ ಗೈಡ್, ಕಬ್ ಬುಲ್ ಬುಲ್ ಬನ್ನಿ ಇದರ ಪ್ರತಿಜ್ಞೆಯೊಂದಿಗೆ ಮುಂದುವರಿದು ಬೇಡನ್ ಪವೆಲ್ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮೊದಲುಗೊಂಡು ನಂತರ ಎಲ್ಲಾ ದಳನಾಯಕರುಗಳು ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆ ದಿನದ ಮಹತ್ವದ ಕುರಿತಾಗಿ ಸ್ಕೌಟ್ ವಿದ್ಯಾರ್ಥಿ ಅರುಷ್ ಪಿ ಜೋಶಿ ದಿನದ ಚಿಂತನ ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಕುಮಾರಿ ವೈಭವಿ ನಡೆಸಿಕೊಟ್ಟರು. ಬುಲ್ ಬುಲ್ ವಿದ್ಯಾರ್ಥಿನಿ ಕುಮಾರಿ ಶ್ರೇಯಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸ್ಕೌಟ್ ಮಾಸ್ಟರ್ ಗಳು ಕಬ್ ಮಾಸ್ಟರ್ ಗಳು ಗೈಡ್ ಹಾಗೂ ಬುಲ್ ಬುಲ್ ಲೀಡರ್ ಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!