25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!