ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!